ಬೆಂಗಳೂರು ಮತ್ತು ಮೈಸೂರು ಹೆದ್ದಾರಿ ಕಾರಿಡಾರ್ಗೆ – ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರ ಮಹಾ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡುವಂತೆ ಮನವಿ.
ಇಡೀ ದೇಶದಲ್ಲಿ, ಕರ್ನಾಟಕದ ಈ ದಕ್ಷಿಣ ಭಾಗವು ಯಾವಾಗಲೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ.
ಜೀವನ, ಅಭಿವೃದ್ಧಿ, ತತ್ವಶಾಸ್ತ್ರ, ರಾಜಕೀಯ, ಅರ್ಥಶಾಸ್ತ್ರ, ಸಂಸ್ಕೃತಿ ಮತ್ತು ಇನ್ನೂ ಹೆಚ್ಚಿನವು. ಹಲವಾರು ಮಹಾನ್ ವ್ಯಕ್ತಿಗಳ ಕೊಡುಗೆಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಮತ್ತು ಸಾಕಷ್ಟು ಮನ್ನಣೆಗಳು ಸಂಭವಿಸಿವೆ.
ಜಾತಿ ಮತ್ತು ಧರ್ಮದ ಭೇದವಿಲ್ಲದೆ ಎಲ್ಲರಿಗೂ ಉಚಿತ ಶಾಲೆಗಳು, ಕೈಗೆಟುಕುವ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮೂಲಕ ಶಿಕ್ಷಣ, ಆರೋಗ್ಯ ಮತ್ತು ವಿಜ್ಞಾನಕ್ಷೇತ್ರದಲ್ಲಿ ಶ್ರೀ ಆದಿ ಚುಂಚನಗಿರಿ ಮಠದ ಮತ್ತು ಪರಮಪೂಜ್ಯ ಜಗದ್ಗುರು ಪದ್ಮವಿಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ಸ್ವಾಮಿಗಳ ಕೊಡುಗೆ ಗಮನಾರ್ಹವಾದದ್ದು.
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರ ಮಹಾ ಸ್ವಾಮೀಜಿಗಳ ಸೇವೆಯನ್ನು ಪರಿಗಣಿಸಿ, ಬೆಂಗಳೂರು ಮತ್ತು ಮೈಸೂರು ಹೆದ್ದಾರಿ ಕಾರಿಡಾರ್ಗೆ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಒಕ್ಕಲಿಗರ ಯುವ ಬ್ರಿಗೇಡ್ ಮತ್ತು ಒಕ್ಕಲಿಗರ ಅನಿವಾಸಿ ಭಾರತೀಯ ಬ್ರಿಗೇಡ್ ರವರು ಶ್ರೀ ನಿತಿನ್ ಗಡ್ಕರಿ – ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಿ – ಭಾರತ ಸರ್ಕಾರ ಹಾಗೂ ಶ್ರೀ ಪ್ರತಾಪ್ ಸಿಂಹ, ಲೋಕಸಭಾ ಸದಸ್ಯರು – ಮೈಸೂರ್-ಕೊಡಗು ಅವರಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.
ಒಕ್ಕಲಿಗರ ಯುವ ಬ್ರಿಗೇಡ್ ಮತ್ತು ಒಕ್ಕಲಿಗರ ಅನಿವಾಸಿ ಭಾರತೀಯ ಬ್ರಿಗೇಡ್ ಒಂದು ಸಾಮಾಜಿಕ ಕಳಕಳಿಯುಳ್ಳ ಸಂಸ್ಥೆ, ನೂರಾರು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮಾರ್ಗದರ್ಶನಗಳನ್ನು ನೀಡುತ್ತಾ ದಾರಿದೀಪವಾಗಿದೆ. ಈ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ನಂಜೇಗೌಡ ನಂಜುಂಡ ರವರ ಪ್ರಯತ್ನದಿಂದ ದೇಶ-ವಿದೇಶದಲ್ಲಿ ನೆಲೆಸಿರುವ ಜನಾಂಗದ ಯುವಕರನ್ನು ಒಂದುಗೂಡಿಸಿ ಸಮಾಜ ಸೇವೆ, ಸಮಾಜ ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ.
ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಇದೇ ಮೊದಲು, ಬೆಂಗಳೂರು ಮೂಲದ ಮೂಕ ವಕೀಲೆ ವಾದ!
ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನಲ್ಲಿ ವಾಕ್- ಶ್ರವಣ ದೋಷವುಳ್ಳ ವಕೀಲೆಯೊಬ್ಬರು ಸಂಕೇತ ಭಾಷೆ (ಸಂಜ್ಞೆ ಭಾಷೆ) ಮೂಲಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ...