sakhigeetha.com

Top 1 Women's Magazines & Publications

Latest:
ಸುದ್ದಿ ಜಗತ್ತು

ಸೌಜನ್ಯಾ ಕೇಸ್‌ಗೆ ಸುಪ್ರೀಂ ಕೌಂಟ್ ಡೌನ್: ಕರ್ನಾಟಕ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ!

ನವದೆಹಲಿ: ದಶಕಕ್ಕೂ ಹೆಚ್ಚು ಕಾಲದಿಂದ ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇಂದು ಮಹತ್ವದ ತಿರುವು ಲಭಿಸಿದೆ. ಪ್ರಕರಣದ ಮರು ತನಿಖೆ ಕೋರಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸಿಬಿಐ (CBI) ಗೆ ನೋಟಿಸ್ ಜಾರಿ ಮಾಡಿದೆ.

ಇಂದಿನ ವಿಚಾರಣೆಯ ಹೈಲೈಟ್ಸ್:

  • ಸುಪ್ರೀಂ ನೋಟಿಸ್: ಜಸ್ಟಿಸ್ ಸಂಜಯ್ ಕುಮಾರ್ ಮತ್ತು ಜಸ್ಟಿಸ್ ವಿನೋದ್ ಚಂದ್ರನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಆದೇಶ ನೀಡಿದೆ. ತನಿಖೆಯಲ್ಲಿನ ಲೋಪದೋಷಗಳ ಬಗ್ಗೆ ವಿವರಣೆ ನೀಡುವಂತೆ ಸರ್ಕಾರ ಮತ್ತು ತನಿಖಾ ಸಂಸ್ಥೆಗೆ ಸೂಚಿಸಿದೆ.
  • ತಾಯಿಯ ಹೋರಾಟಕ್ಕೆ ಬಲ: ಈ ಹಿಂದೆ ಹೈಕೋರ್ಟ್ ಮರು ತನಿಖೆಯ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಗಳ ಸಾವಿಗೆ ನ್ಯಾಯ ಸಿಗಬೇಕು, ಅಸಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂಬ ಅವರ ಛಲಕ್ಕೆ ಈಗ ಸುಪ್ರೀಂ ಅಂಗಳದಲ್ಲಿ ಭರವಸೆ ಸಿಕ್ಕಂತಾಗಿದೆ.
  • ಮುಂದಿನ ವಿಚಾರಣೆ: ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಏಪ್ರಿಲ್ 28, 2026ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *